ರಾಜ್ಯ ಬಿಜೆಪಿಯ ಬಾಕಿ ಉಳಿದಿದ್ದ ಹತ್ತು ಜಿಲ್ಲೆಗಳಿಗೆ ನೂತನ ಅಧ್ಯಕ್ಷರ ನೇಮಕವಾಗಿದೆ. ಇದರೊಂದಿಗೆ ರಾಜ್ಯ ಬಿಜೆಪಿಯ ಎಲ್ಲ ಜಿಲ್ಲೆಗಳ ಸಂಘಟನಾತ್ಮಕ ಜಿಲ್ಲಾಧ್ಯಕ್ಷರ ನೇಮಕ ಪ್ರಕ್ರಿಯೆ ಪೂರ್ಣಗೊಂಡಂತಾಗಿದ್ದು, ರಾಜ್ಯಾಧ್ಯಕ್ಷರ ನೇಮಕಕ್ಕೆ ಹಾದಿ ಮತ್ತಷ್ಟು ಸುಗಮವಾಗಿದೆ.
ಕಾನೂನು ಪದವಿ ಪಡೆದು, ವಕೀಲಿಕೆ ನಡೆಸಲು ಸನ್ನದು ನೋಂದಾಯಿಸಿಕೊಂಡ ನಂತರ ಸರ್ಕಾರಿ, ಅರೆ ಸರ್ಕಾರಿ, ನ್ಯಾಯಾಂಗ ಇಲಾಖೆ ಮತ್ತು ಖಾಸಗಿ ಕಂಪನಿಯಲ್ಲಿ ಉದ್ಯೋಗಕ್ಕೆ ಸೇರಿಕೊಂಡಿರುವವರು ತಮ್ಮ ಸನ್ನದು ಅಮಾನತು ಮಾಡಿಕೊಳ್ಳಲು ಕಾಲಾವಕಾಶ ವಿಸ್ತರಿಸಿದೆ.
ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ವಿಧಿಸಿದ್ದ 7 ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತ್ತಿನಲ್ಲಿ ಇಟ್ಟಿರುವ ತೆಲಂಗಾಣ ಹೈಕೋರ್ಟ್ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ವಿಧಾನಪರಿಷತ್ತಿನ ನಾಲ್ಕು ನಾಮಕರಣ ಸ್ಥಾನಗಳಿಗೆ ಅಖೈರುಗೊಂಡಿದ್ದ ಪಟ್ಟಿಗೆ ಹೈಕಮಾಂಡ್ ತಾತ್ಕಾಲಿಕ ಬ್ರೇಕ್ ನೀಡಿದೆ. ಇನ್ನಷ್ಟು ಚರ್ಚೆಯ ಅಗತ್ಯವಿರುವ ಹಿನ್ನೆಲೆಯಲ್ಲಿ ಪಟ್ಟಿಗೆ ತಡೆ ನೀಡಲಾಗಿದೆ.