ಬಿಜೆಪಿ ಶಾಸಕ ಜನಾರ್ದನ ರೆಡ್ಡಿಯಿಂದ ವ್ಯಾವಹಾರಿಕ ಹಾಗೂ ರಾಜಕೀಯವಾಗಿ ಮುನಿಸಿಕೊಂಡಿರುವ ಮಾಜಿ ಸಚಿವ ಬಿ.ಶ್ರೀರಾಮುಲು ಅವರು, ರೆಡ್ಡಿ ಮತ್ತು ತಮ್ಮ ಮನೆಗೆ ಸಂಪರ್ಕವಿದ್ದ ಗೇಟನ್ನು ಬಂದ್ ಮಾಡಿದ್ದಾರೆ.
ಮಾಜಿ ಸಚಿವರಾದ ಬಿ.ಶ್ರೀರಾಮುಲು ಮತ್ತು ಗಾಲಿ ಜನಾರ್ದನರೆಡ್ಡಿ ನಡುವೆ ವಾಕ್ಸಮರ ತೀವ್ರಗೊಂಡ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶುಕ್ರವಾರ ದೆಹಲಿಗೆ ದಿಢೀರ್ ಭೇಟಿ ನೀಡಿದ್ದು ಕುತೂಹಲ ಮೂಡಿಸಿದೆ.
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಕ್ಲೀನ್ ಚೀಟ್ ಸಿಗುವ ನಿರೀಕ್ಷೆ ಇತ್ತು, ಇಡಿ, ಸಿಬಿಐ, ಐಟಿ ಏನೇ ಬರಲಿ ಎದುರಿಸಲು ಸಿದ್ಧ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಅಧ್ಯಕ್ಷ ಹುದ್ದೆಯ ಬದಲಾವಣೆ ಕುರಿತು ಭಾರೀ ಗದ್ದಲ ನಡೆದಿರುವ ನಡುವೆಯೇ, ಇತ್ತೀಚೆಗೆ ನಡೆದ ಬಿಜೆಪಿ ಕೋರ್ಕಮಿಟಿ ಸಭೆಯಲ್ಲಿದ್ದ ಶೇ.80ರಷ್ಟು ಸದಸ್ಯರು ನನ್ನನ್ನೇ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರೆಸುವ ಬಗ್ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಹಾಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
‘ಒಂದು ಕಾಲದಲ್ಲಿ ವಿರೋಧಿಗಳ ಕೊಲೆ ಮಾಡಲು ರೌಡಿಗಳ ಜತೆ ಸೇರಿ ಹೊರಟಿದ್ದ ಶ್ರೀರಾಮುಲುಗೆ ಬುದ್ಧಿವಾದ ಹೇಳಿ ತಾಯಿ ತನ್ನ ಮಗುವನ್ನು ಬೆಳೆಸುವಂತೆ ಸನ್ಮಾರ್ಗದಲ್ಲಿ ಕರೆತಂದು ಈ ಮಟ್ಟಕ್ಕೆ ಬೆಳೆಸಿದ್ದೇನೆ.
ನಾನು ಹಾದಿ ಬೀದಿಯಿಂದ ಬಂದ ವ್ಯಕ್ತಿಯಲ್ಲ. ರಾಜಕೀಯ ಹಿನ್ನೆಲೆ ಇರುವ ಕುಟುಂಬ ನಮ್ಮದು. ಜನಾರ್ದನ ರೆಡ್ಡಿಯಿಂದ ನನಗೆ ಯಾವುದೇ ರೀತಿಯ ಲಾಭ ಆಗಿಲ್ಲ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಒಂದು ಕಾಲದ ತಮ್ಮ ಆತ್ಮೀಯ ಮಿತ್ರ ಜನಾರ್ದನ ರೆಡ್ಡಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಲ್ಲದಕ್ಕೂ ವಿಶ್ವಾಸ ಕೊರತೆಯೇ ಕಾರಣ । ಎರಡೂ ಕಡೆಯವರೇ ಮುಂದೆ ಬಂದು ಮಾತಾಡಿದರಷ್ಟೇ ಪರಿಹಾರ: ಸುನೀಲ್ಕುಮಾರ್
ಜೆಡಿಎಸ್ನಲ್ಲಿ ಬಂಡಾಯದ ಕಿಡಿ ಹಾರಿಸಿರುವ ಶಾಸಕ ಜಿ.ಟಿ.ದೇವೇಗೌಡ ಅವರು ನನ್ನ ಪಕ್ಷದಿಂದ ಉಚ್ಛಾಟಿಸಲು ತಾಕತ್ತು, ಧಮ್ ಬೇಕು ಎಂದು ಪಕ್ಷದ ಹಿರಿಯ ನಾಯಕರಿಗೆ ಸವಾಲು ಹಾಕಿದ್ದಾರೆ.
ಪಕ್ಷದ ಜಿಲ್ಲಾ ಘಟಕಗಳ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಹಿರಿಯ ನಾಯಕರು ಬುಧವಾರ ರಾತ್ರಿ ಪ್ರತ್ಯೇಕವಾಗಿ ಸಭೆ ನಡೆಸಿದ್ದು ಕುತೂಹಲ ಮೂಡಿಸಿದೆ.
ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸೋಲಿನ ವಿಚಾರದಲ್ಲಿ ಗಾಲಿ ಜನಾರ್ದನರೆಡ್ಡಿ ನನ್ನ ವಿರುದ್ಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಾಧಾ ಮೋಹನ್ರಾವ್ ಅವರಿಗೆ ಸುಳ್ಳು ಚಾಡಿ ಹೇಳಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಗಂಭೀರವಾಗಿ ಆಪಾದಿಸಿದ್ದಾರೆ.