ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಸೇರಿ ನಾಲ್ವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ಇಲ್ಲವೆಂದು ಲೋಕಾಯುಕ್ತ ಪೊಲೀಸರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ‘ಬಿ’ ವರದಿ ಸಲ್ಲಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರದಲ್ಲಿ ಅನಗತ್ಯವಾಗಿ ಹೇಳಿಕೆ ನೀಡದಂತೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ರಸ್ತೆ ಅಗಲೀಕರಣಕ್ಕಾಗಿ ಬೆಂಗಳೂರು ಅರಮನೆ ಮೈದಾನದ 15.7 ಎಕರೆ ಜಾಗಕ್ಕೆ ₹3,011 ಕೋಟಿ ಟಿಡಿಆರ್ ಪರಿಹಾರ ನೀಡುವುದರಿಂದ ಪಾರಾಗಲು ಸುಪ್ರೀಂ ಕೋರ್ಟ್ ಹಿರಿಯ ವಕೀಲರು ಹಾಗೂ ಕಾನೂನು ತಜ್ಞರೊಂದಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಾಗಿದೆ.
ಸಿದ್ದರಾಮಯ್ಯ ಸಾಹೇಬ್ರು ಪ್ರಾಮಾಣಿಕರಾಗಿರುವುದರಿಂದ ಯಾವುದೇ ತಪ್ಪು ಮಾಡಿಲ್ಲ. ಅವರು ಆವತ್ತು ಪ್ರಾಮಾಣಿಕರೇ ಈವತ್ತೂ ಪ್ರಾಮಾಣಿಕರೇ ಎಂದು ಶಾಸಕ ಪ್ರದೀಪ್ ಈಶ್ವರ್ ಮುಖ್ಯಮಂತ್ರಿಗಳನ್ನು ಸಮರ್ಥಿಸಿದ್ದಾರೆ.
ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಲು ಲೋಕಾಯುಕ್ತ ಪೊಲೀಸರು ಮುಂದಾಗಿರುವುದಕ್ಕೆ ಬಿಜೆಪಿ ತೀವ್ರವಾಗಿ ಟೀಕಿಸಿದೆ.