ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಹನಿಟ್ರ್ಯಾಪ್ ಆಗಿರುವ ಅನುಮಾನವಿದೆ. ತನಿಖೆಯಾದರೆ ತಮ್ಮದೂ ಎಲ್ಲಿ ಆಚೆ ಬರುತ್ತದೋ ಎಂಬ ಭಯ ಅವರಿಗೆ ಕಾಡುತ್ತಿರಬೇಕು. ಅದಕ್ಕಾಗಿ ಅವರು ಹನಿಟ್ರ್ಯಾಪ್ ಪ್ರಕರಣದ ತನಿಖೆಗೆ ಸೂಚಿಸುತ್ತಿಲ್ಲ ಎಂದು ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.
ಶೋಕಾಸ್ ನೋಟಿಸ್ಗೆ ನಿಗದಿತ ಸಮಯದಲ್ಲಿ ಉತ್ತರ ನೀಡುತ್ತೇನೆ ಎಂದು ತಿಳಿಸಿರುವ ಮಾಜಿ ಸಚಿವ ಕಟ್ಟಾ ಸುಬ್ರಮಣ್ಯನಾಯ್ಡು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿನ ಬೆಳವಣಿಗೆಗಳ ಬಗ್ಗೆ ಚರ್ಚಿಸುತ್ತೇನೆ ಎಂದೂ ಹೇಳಿದ್ದಾರೆ.
ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರಿಗೆ ಶೀಘ್ರದಲ್ಲೇ ಸಿಎಂ ಆಗುವ ಭಾಗ್ಯ ಇದೆ ಎಂದು ಹಾಲುಮತದ ಗೊರವಯ್ಯ ಭವಿಷ್ಯ ನುಡಿದಿದ್ದಾರೆ.
ನಾನು ಯಾರ ಒತ್ತಡಕ್ಕೂ ಮಣಿದು ಕೆಲಸ ಮಾಡುವುದಿಲ್ಲ. ಶಾಸಕರ ಅಮಾನತಿನ ನಿರ್ಧಾರ ನಿಯಮದಂತೆ ಮಾಡಲಾಗಿದೆ. ಇದು ಅವರ ಮೇಲೆ ಯಾವುದೇ ಕೋಪ, ದ್ವೇಷದಿಂದ ತೆಗೆದುಕೊಂಡ ನಿರ್ಧಾರವಲ್ಲ.
ಸತೀಶ್ ಜಾರಕಿಹೊಳಿ ಅವರು ಯಾವ ಕಾರಣಕ್ಕೆ ಕುಮಾರಸ್ವಾಮಿ, ದೇವೇಗೌಡರನ್ನು ಭೇಟಿ ಮಾಡಿದ್ದಾರೋ ನನಗೆ ಗೊತ್ತಿಲ್ಲ, ಅವರನ್ನೇ ಕೇಳಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬಿಜೆಪಿಯಿಂದ ಉಚ್ಚಾಟನೆಯಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ‘ಇದು ಸತ್ಯವಂತರಿಗೆ ಕಾಲವಲ್ಲ’ ಎಂದು ಪುರಂದರದಾಸರ ಕೀರ್ತನೆ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ದೆಹಲಿಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಈ ಭೇಟಿ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ರಾಜ್ಯ ಬಿಜೆಪಿಯಲ್ಲಿನ ಭಿನ್ನಮತ ನಿರ್ಣಾಯಕ ಹಂತಕ್ಕೆ ತಲುಪಿದ್ದು, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಸಮರ ಸಾರಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಆರು ವರ್ಷ ಉಚ್ಚಾಟಿಸಲಾಗಿದೆ. ಯತ್ನಾಳ್ ಅವರು ಬಿಜೆಪಿಯಿಂದ ಉಚ್ಚಾಟನೆಗೊಳ್ಳುತ್ತಿರುವುದು ಇದು ಮೂರನೇ ಬಾರಿ.
ಯಶಸ್ವಿಯಾಗಿ ಗ್ಯಾರಂಟಿ ಯೋಜನೆ ನೀಡಿದ ರಾಜ್ಯ ಕಾಂಗ್ರೆಸ್ ಅದರ ಪ್ರಯೋಜನ ಪಡೆಯುತ್ತಿಲ್ಲ. ಬದಲಾಗಿ ಮುಖ್ಯಮಂತ್ರಿ ಬದಲಾವಣೆ, ಮೂರು ಡಿಸಿಎಂ ಹುದ್ದೆ ಸೃಷ್ಟಿ, ದಲಿತ ಮುಖ್ಯಮಂತ್ರಿ ಹಾಗೂ ಇದೀಗ ಹನಿಟ್ರ್ಯಾಪ್ನಂಥ ವಿಚಾರಗಳನ್ನು ಮುಂದಿಟ್ಟುಕೊಂಡು ಬೀದಿ ಜಗಳಕ್ಕೆ ಇಳಿದಿರುವುದು ಅಸಮಾಧಾನ ಹುಟ್ಟುಹಾಕಿದೆ.