ಇಂದಿರಾಗಾಂಧಿ ಕನಸು ಸಿದ್ದು ನನಸುಬಡವರಿಗೆ ಆಸ್ತಿ ಹಕ್ಕು ನೀಡಬೇಕು ಎಂಬುದು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಕನಸಾಗಿತ್ತು. ಅದನ್ನು ಇದೀಗ ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಈಡೇರಿಸಿದೆ. ಅದೇ ರೀತಿ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ‘ಉಳುವವನೇ ಭೂ ಒಡೆಯ’ ಎಂದು ಸಾರಿದಂತೆ, ಸಿದ್ದರಾಮಯ್ಯ ಸರ್ಕಾರ ‘ವಾಸಿಸುವನೇ ಮನೆ ಒಡೆಯ’ ಎಂಬ ಯೋಜನೆ ಸಾಕಾರಗೊಳಿಸಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಶ್ಲಾಘಿಸಿದ್ದಾರೆ.