ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಪಾತ್ರವೇ ಇಲ್ಲ. ಹೀಗಾಗಿ ಪ್ರಿಯಾಂಕ್ ಖರ್ಗೆ ಪರ ಎಲ್ಲಾ ಸಚಿವರು ಗಟ್ಟಿಯಾಗಿ ನಿಲ್ಲಬೇಕು. ಬಿಜೆಪಿ ನಾಯಕರ ಮೇಲಿರುವ ಪ್ರಕರಣಗಳನ್ನು ಮುಂದಿಟ್ಟುಕೊಂಡು ರಾಜೀನಾಮೆ ನೀಡುವಂತೆ ಆಗ್ರಹಿಸಬೇಕು ಎಂದು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಅಂಬೇಡ್ಕರ್ರ ಪಿಒಪಿ ಪುತ್ಥಳಿ ಇಟ್ಟು ಅಪಮಾನ ಮಾಡಿ ಅಶಾಂತಿ ವಾತಾವರಣವನ್ನುಂಟು ಮಾಡುತ್ತಿರುವವರನ್ನೂ ಕೂಡಲೇ ಬಂಧಿಸಿ, ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು, ದಲಿತ ಪರ ಸಂಘಟನೆಗಳ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ತಹಸೀಲ್ದಾರ್ ಸುದರ್ಶನ್ ಯಾದವ್ಗೆ ಮನವಿ ಸಲ್ಲಿಸಿದರು.
ತಳಮಟ್ಟದಿಂದ ಮತ್ತೊಮ್ಮೆ ಪಕ್ಷ ಸಂಘಟಿಸಲು ಸಜ್ಜಾಗಿರುವ ಜೆಡಿಎಸ್ ಇದೇ ತಿಂಗಳಲ್ಲಿ ಸಭೆಯೊಂದನ್ನು ಕರೆದು ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ದೂರಮಾಡಿ ಒಗ್ಗಟ್ಟಿನೊಂದಿಗೆ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸುವ ಸಂಬಂಧ ರಾಜಕೀಯ ತಂತ್ರಗಾರಿಕೆ ರೂಪಿಸುವ ಸಂಬಂಧ ಚರ್ಚೆ ನಡೆಸಲು ಮುಂದಾಗಿದೆ.
ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಿ ಅಸಮಾನತೆ ಹಾಗೂ ಪ್ರಾದೇಶಿಕ ಅಸಮತೋಲನ ತೊಡೆದು ಹಾಕಲು ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಹಿಂದಿನ ವರ್ಷಗಳ ಅನುಭವದಿಂದ ಪಾಠ ಕಲಿತು ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳಬೇಕು ಎಂದು ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ಬಿಜೆಪಿಗೆ ನಾನು, ನನ್ನ ತಂದೆಯೇ ಟಾರ್ಗೆಟ್
-ವರ್ಷದಲ್ಲಿ ನಾಲ್ಕೈದು ಬಾರಿ ನನ್ನ ರಾಜೀನಾಮೆ ಕೇಳುತ್ತಿದ್ದಾರೆ । ರಿಪೋರ್ಟ್ ಕಾರ್ಡಲ್ಲಿ ಎ ಗ್ರೇಡ್ ಮಾರ್ಕ್ಸ್ಗಾಗಿ ಬಿಜೆಪಿ ಸರ್ಕಸ್:
ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಸಚಿವ.
ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಪಾತ್ರವಿಲ್ಲ, ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳೂ ಇಲ್ಲ. ಪ್ರಿಯಾಂಕ್ ರಾಜೀನಾಮೆ ಪಡೆಯುವ ಪ್ರಶ್ನೆಯೇ ಇಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ಸಿ.ಟಿ.ರವಿ ಬಳಸಿದ್ದಾರೆನ್ನಲಾದ ಆಕ್ಷೇಪಾರ್ಹ ಪದ ಪ್ರಕರಣಕ್ಕೆ ಸಂಬಂಧಿಸಿ ಸ್ಥಳ ಮಹಜರು ವಿಚಾರದಲ್ಲಿ ಗೊಂದಲ ಮುಂದುವರಿದಿದ್ದು, ಯಾವ ರೀತಿಯಲ್ಲಿ ಮಹಜರು ಮಾಡಲಾಗುತ್ತದೆ ಎಂಬುದನ್ನು ವಿವರಿಸುವಂತೆ ವಿಧಾನಪರಿಷತ್ ಸಚಿವಾಲಯವು ಸಿಐಡಿಗೆ ಪತ್ರ ಬರೆದಿದೆ.
ಪಕ್ಷದ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಬಣದ ಚಟುವಟಿಕೆಗಳಿಂದ ಪಕ್ಷ ಸಂಘಟನೆಗೆ ಅಡ್ಡಿಯಾಗುತ್ತಿದ್ದು, ಕಡಿವಾಣ ಹಾಕಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕೇಂದ್ರ ಗೃಹ ಸಚಿವರೂ ಆಗಿರುವ ಪಕ್ಷದ ಪ್ರಭಾವಿ ರಾಷ್ಟ್ರೀಯ ನಾಯಕ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ.
ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿರುವ ಗುತ್ತಿಗೆದಾರ ಸಚಿನ್ ಪಂಚಾಳ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ.