ಬಸನಗೌಡ ಪಾಟೀಲ್ ಯತ್ನಾಳ್ ಹಿಂದುಗಳ ಹುಲಿಯಲ್ಲ, ಇಲಿ. ನಿಮ್ಮ ಆಟ ಇನ್ನು ಹೆಚ್ಚು ದಿನ ನಡೆಯೋದಿಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದರು.
ಬೆಳಗಾವಿ ಚಳಿಗಾಲ ಅಧಿವೇಶನದ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್ ರಚನೆ ಸೇರಿ ಕೈ ಪಾಳಯದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂಬ ಚರ್ಚೆ ಜೋರಾಗಿದ್ದು, ಮೊದಲ ಅವಧಿಯಲ್ಲಿ ಮಂತ್ರಿಗಿರಿ ಕೈ ತಪ್ಪಿದ ನಾಯಕರು ಈ ಬಾರಿಯಾದರೂ ಶತಾಯಗತಾಯ ಕ್ಯಾಬಿನೆಟ್ಗೆ ಸೇರ್ಪಡೆ ಆಗಲೆಬೇಕೆಂದು ಪ್ರಯತ್ನ
ಭಾರತದಲ್ಲಿ ಇವಿಎಂ ಯಂತ್ರದ ಬದಲು ಮರಳಿ ಬ್ಯಾಲೆಟ್ ಪೇಪರ್ ತರಬೇಕು ಎಂಬ ಕಾಂಗ್ರೆಸ್ ಬೇಡಿಕೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂಬು ನೀಡಿದ್ದಾರೆ. ಇವಿಎಂ ಬದಲು ಬ್ಯಾಲೆಟ್ ಪೇಪರ್ಗೆ ಹೋಗುವುದು ಒಳ್ಳೆಯದು’ ಎಂದು ಹೇಳಿವ ಮೂಲಕ ಇವಿಎಂ ಬಗ್ಗೆ ತಮ್ಮ ಅಸಮ್ಮತವನ್ನು ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಮೇಕೆದಾಟು ಸಮತೋಲನ ಜಲಾಶಯ ಮತ್ತು ಕಳಸಾ ಬಂಡೂರಿ ಯೋಜನೆಗಳಿಗೆ ತುರ್ತು ಅನುಮತಿ ನೀಡುವಂತೆ ಮನವಿ ಮಾಡಿದರು. ಅಲ್ಲದೆ, ನಬಾರ್ಡ್ ನೆರವು ಹೆಚ್ಚಳಕ್ಕೆ ಆಗ್ರಹಿಸಿದರು.
ನಿರೀಕ್ಷೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಪ್ರಕ್ರಿಯೆ ಸದ್ಯಕ್ಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಇದನ್ನು ಅನುಮೋದಿಸಿ ಸಂಪುಟ ಪುನಾರಚಿಸುವ ಸಂದರ್ಭ ಉದ್ಭವ ಎಂದು ಹೇಳಿದ್ದಾರೆ.
ಹರ್ಯಾಣ, ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ಬಗ್ಗೆ ಚಾಟಿ ಬೀಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಆಂತರಿಕ ಕಚ್ಚಾಟ ಮತ್ತು ಪರಸ್ಪರರ ಮೇಲಿನ ಟೀಕೆಗಳು ಫಲಿತಾಂಶದ ಮೇಲೆ ಗಂಭೀರ ಪರಿಣಾಮ ಬೀರಿವೆ ಎಂದರು
ಬಿಜೆಪಿಯಲ್ಲಿ ಬಣ ಜಗಳ ತಾರಕಕ್ಕೇರಿದ್ದು, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟೀಂಗೆ ಟಾಂಗ್ ಕೊಡಲು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಂಡ ದೇಗುಲ ಯಾತ್ರೆ ಆರಂಭಿಸಿದೆ.