ರಾಜ್ಯದಲ್ಲಿ ಬಿಜೆಪಿ ಪಕ್ಷ ಕಟ್ಟಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಪಕ್ಷದವರೇ ಆದ ಬಸವನಗೌಡ ಪಾಟೀಲ್ ಯತ್ನಾಳ್ ಇಲ್ಲಸಲ್ಲದ ಆರೋಪಗಳನ್ನು ಮಾಡಿದ್ದು ಪಕ್ಷದ ಹೈಕಮಾಂಡ್ ಅವರ ಮೇಲೆ ಶಿಸ್ತುಕ್ರಮ ಕೈಗೊಳ್ಳಲಿದೆ
ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮತ್ತು ತಹಸೀಲ್ದಾರ್ ವೆಂಕಟೇಶಪ್ಪ ನಡುವೆ ಹೊಂದಾಣಿಕೆ ಇಲ್ಲದೆ ಇಬ್ಬರ ನಡುವೆ ಶೀತಲ ಸಮರ ನಡೆಯುತ್ತಿದ್ದು, ತಹಸೀಲ್ದಾರ್ರನ್ನು ಇಲ್ಲಿಂದ ಎತ್ತಂಗಡಿ ಮಾಡಿಸಲು ಕಾಣದ ಕೈಗಳು ತೆರೆಮರೆಯಲ್ಲಿ ಪ್ರಯತ್ನ ಮಾಡುತ್ತಿರುವುದಾಗಿ ತಿಳಿದು ಬಂದಿದೆ.
ಸುಳ್ಳು ಆರೋಪ ಮಾಡಿ ಸರ್ಕಾರ ಅಸ್ಥಿರಗೊಳಿಸುವ ಯತ್ನ ಮಾಡುತ್ತಿದ್ದಾರೆ. ಆ ಮೂಲಕ ಪ್ರಜಾಪ್ರಭುತ್ವ ಕೊಲ್ಲುವ ಯತ್ನ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು.
ಕಳೆದ 10 ವರ್ಷಗಳಲ್ಲಿ ಭಾರತ ಹಲವು ಬದಲಾವಣೆಗಳನ್ನು ಕಂಡಿದೆ. ವಿಶ್ವದಲ್ಲೇ 4ನೇ ಅತಿದೊಡ್ಡ ಆರ್ಥಿಕತೆಯನ್ನು ಹೊಂದಿರುವ ದೇಶವಾಗಿ ಬೆಳೆದಿದೆ. ನಮ್ಮ ದೇಶದ ಆರ್ಥಿಕತೆಯು ಪ್ರಪಂಚದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ ಎಂದು ಬಿಜೆಪಿ ಮುಖಂಡ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.
ರಾಜ್ಯದ 293 ಬಸ್ಸು ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್ಗಳನ್ನು ಸ್ಥಾಪಿಸಲು ಹಾಗೂ ಚಿಕ್ಕಬಳ್ಳಾಪುರ ನಂದಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಮಂಜೂರಾಗಿದ್ದ 50 ಹಾಸಿಗೆ ತೀವ್ರ ನಿಗಾ ಆರೈಕೆ ಘಟಕವನ್ನು ಚಿಕ್ಕಬಳ್ಳಾಪುರ ಬದಲಿಗೆ ಚಿಂತಾಮಣಿಗೆ ಸ್ಥಳಾಂತರ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.
ಸಚಿವ ಸಂಪುಟ ಪುನಾರಚನೆ ನಡೆಯುವ ವೇಳೆಯೇ ಸ್ಪೀಕರ್ ಸ್ಥಾನಕ್ಕೂ ಬದಲಾವಣೆಯಾಗುವ ಸಾಧ್ಯತೆ ದಟ್ಟವಾಗಿದೆ.
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಾಧಿಪತಿ ಸ್ಥಾನವನ್ನು ರಾಜ್ಯಪಾಲರಿಂದ ಹಿಂಪಡೆಯಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರಾತ್ರಿ ದೆಹಲಿ ತಲುಪಿದ್ದು ಶುಕ್ರವಾರ ಬೆಳಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ನಂತರ ಮಧ್ಯಾಹ್ನ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.
‘ಕಾಂಗ್ರೆಸ್ ವಲಯದಲ್ಲಿ ಗುಲ್ಲೆದ್ದಿರುವ ಸಚಿವ ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಮೇಲ್ಮನೆಗೆ 4 ಸದಸ್ಯರ ನಾಮನಿರ್ದೇಶನ ಕುರಿತು ಪಕ್ಷದ ಹೈಕಮಾಂಡ್ ಚರ್ಚೆ ಆರಂಭಿಸುವುದೇ ಬೆಳಗಾವಿ ವಿಧಾನಮಂಡಳದ ಚಳಿಗಾಲ ಅಧಿವೇಶನದ ನಂತರ’ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.
‘ದೆಹಲಿಯಿಂದ ಹೈಕಮಾಂಡ್ನವರು ಬುಧವಾರ ನನಗೆ ಕರೆ ಮಾಡಿ, ತಕ್ಷಣ ಹೊರಟು ಬನ್ನಿ ಎಂದಿದ್ದರು. ಆದರೆ, ನಾನು ಒಬ್ಬನೇ ಬರೋದಿಲ್ಲ, ನನ್ನ ಟೀಮ್ ಸಹಿತ ಬರುವೆ ಎಂದು ಉತ್ತರಿಸಿದ್ದೇನೆ’ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.