ದೋಸ್ತಿ ಜಗಳದ ಬೆನ್ನಲ್ಲೇ ಬಳ್ಳಾರಿ ಗಣಿ ಧಣಿ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಕಾನೂನು ಸಂಕಷ್ಟ ಎದುರಾಗಿದ್ದು, ರೆಡ್ಡಿ ಅವರ ವಿರುದ್ಧ ಅಭಿಯೋಜನೆ (ಪ್ರಾಸಿಕ್ಯೂಷನ್)ಗಾಗಿ ರಾಜ್ಯಪಾಲರಿಗೆ ಕನ್ನಡದಲ್ಲಿ ತರ್ಜುಮೆಗೊಂಡ ವರದಿ ಸಲ್ಲಿಸಿ ಲೋಕಾಯುಕ್ತ ಪೊಲೀಸರು ಮನವಿ ಮಾಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆ ಯಾವುದೇ ಮುನಿಸಿಲ್ಲ, ನಾವೆಲ್ಲ ಒಗ್ಗಟ್ಟಾಗಿದ್ದೇವೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ರಾಜ್ಯ ಬಿಜೆಪಿಯಲ್ಲಿ ಈ ಮಟ್ಟದ ಗೊಂದಲ ಹೆಚ್ಚುವುದಕ್ಕೆ ಕೋರ್ ಕಮಿಟಿ ಸಮರ್ಥವಾಗಿ ನಡೆಯದಿರುವುದೂ ಒಂದು ಕಾರಣ. ಪಕ್ಷದ ಪ್ರಮುಖ ನಿರ್ಧಾರಗಳನ್ನು ಗಟ್ಟಿಯಾಗಿ ತೆಗೆದುಕೊಳ್ಳಬೇಕಾದ ಕೋರ್ ಕಮಿಟಿ ಸಭೆಗಳು ಚೆನ್ನಾಗಿ ನಡೆದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಬೇಸರ ವ್ಯಕ್ತಪಡಿಸಿದ್ದಾರೆ.
ಚುನಾವಣೆಗೆ ಮುಂಚಿತವಾಗಿ ಬಿಜೆಪಿಯ ಶ್ರೀರಾಮುಲು ಅವರನ್ನು ಕಾಂಗ್ರೆಸ್ ಸೇರುವಂತೆ ಆಹ್ವಾನಿಸಿದ್ದು ನಿಜ. ಆದರೆ, ಈಗ ನಾನು ಅವರಿಗೆ ಯಾವುದೇ ಆಹ್ವಾನ ನೀಡಿಲ್ಲ. ಮಾಜಿ ಸಚಿವ ಜನಾರ್ದನ ರೆಡ್ಡಿ ಬಾಯಿ ಚಪಲಕ್ಕೆ ಇಂತಹ ಆರೋಪ ಮಾಡುತ್ತಿದ್ದಾನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬಿಜೆಪಿಯಲ್ಲಿಯೇ ಇರುತ್ತೇನೆ. ಪಕ್ಷ ಬಿಟ್ಟು ಎಲ್ಲೂ ಹೋಗುವುದಿಲ್ಲ’ ಎಂದು ಸ್ಪಷ್ಟಪಡಿಸಿರುವ ಮಾಜಿ ಸಚಿವ ಬಿ.ಶ್ರೀರಾಮುಲು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಸೂಚನೆ ಮೇರೆಗೆ ಶೀಘ್ರವೇ ದೆಹಲಿಗೆ ತೆರಳುವುದಾಗಿ ತಿಳಿಸಿದ್ದಾರೆ.
ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಆಮೇಲೆ ನಮ್ಮ ಶಕ್ತಿ ತೋರಿಸುತ್ತೇವೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಬಿಜೆಪಿ ಶಾಸಕ ಜನಾರ್ದನ ರೆಡ್ಡಿಯಿಂದ ವ್ಯಾವಹಾರಿಕ ಹಾಗೂ ರಾಜಕೀಯವಾಗಿ ಮುನಿಸಿಕೊಂಡಿರುವ ಮಾಜಿ ಸಚಿವ ಬಿ.ಶ್ರೀರಾಮುಲು ಅವರು, ರೆಡ್ಡಿ ಮತ್ತು ತಮ್ಮ ಮನೆಗೆ ಸಂಪರ್ಕವಿದ್ದ ಗೇಟನ್ನು ಬಂದ್ ಮಾಡಿದ್ದಾರೆ.
ಮಾಜಿ ಸಚಿವರಾದ ಬಿ.ಶ್ರೀರಾಮುಲು ಮತ್ತು ಗಾಲಿ ಜನಾರ್ದನರೆಡ್ಡಿ ನಡುವೆ ವಾಕ್ಸಮರ ತೀವ್ರಗೊಂಡ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶುಕ್ರವಾರ ದೆಹಲಿಗೆ ದಿಢೀರ್ ಭೇಟಿ ನೀಡಿದ್ದು ಕುತೂಹಲ ಮೂಡಿಸಿದೆ.
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಕ್ಲೀನ್ ಚೀಟ್ ಸಿಗುವ ನಿರೀಕ್ಷೆ ಇತ್ತು, ಇಡಿ, ಸಿಬಿಐ, ಐಟಿ ಏನೇ ಬರಲಿ ಎದುರಿಸಲು ಸಿದ್ಧ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಅಧ್ಯಕ್ಷ ಹುದ್ದೆಯ ಬದಲಾವಣೆ ಕುರಿತು ಭಾರೀ ಗದ್ದಲ ನಡೆದಿರುವ ನಡುವೆಯೇ, ಇತ್ತೀಚೆಗೆ ನಡೆದ ಬಿಜೆಪಿ ಕೋರ್ಕಮಿಟಿ ಸಭೆಯಲ್ಲಿದ್ದ ಶೇ.80ರಷ್ಟು ಸದಸ್ಯರು ನನ್ನನ್ನೇ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರೆಸುವ ಬಗ್ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಹಾಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.