ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ಅವರ ಪುತ್ರಿ ನಿಶಾ ಯೋಗೇಶ್ವರ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದು, ಎಲ್ಲವನ್ನೂ ಬೆಳಕಿಗೆ ತರುತ್ತೇನೆ ಎಂದು ಗುಡುಗಿದ್ದಾರೆ.
ಬಿಜೆಪಿಯ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀ ನಾಮೆ ನೀಡಿರುವ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆಯಿದ್ದು, ಕಾಂಗ್ರೆಸ್ ಪಕ್ಷ ಸೇರಿದರೆ ಅವರೇ ಅಭ್ಯರ್ಥಿಯಾಗುವುದು ನಿಶ್ಚಿತ ಎಂದು ತಿಳಿದುಬಂದಿದೆ.
ಚನ್ನಪಟ್ಟಣದಲ್ಲಿ ಕಾಂಗ್ರೆಸ್ನಿಂದ ಡಿ.ಕೆ.ಸುರೇಶ್ ಅವರನ್ನು ಕಣಕ್ಕಿಳಿಸುವಂತೆ ಕಾರ್ಯಕರ್ತರು, ಮುಖಂಡರಿಂದ ತೀವ್ರ ಒತ್ತಡವಿದೆ. ಆಕಾಂಕ್ಷಿತರ ಪಟ್ಟಿಯಲ್ಲಿ ಪುಟ್ಟಣ್ಣ, ಅಶ್ವಥ್, ರಘುನಂದನ್ ಹೆಸರುಗಳೂ ಇವೆ. ನೂರಕ್ಕೆ ನೂರು ಡಿ.ಕೆ.ಸುರೇಶ್ ಅವರನ್ನೇ ಕಣಕ್ಕಿಳಿಸಬೇಕೆಂದು ತೀವ್ರ ಒತ್ತಾಯವಿದೆ.
‘ಯೋಗೇಶ್ವರ್ ಅವರು ಮೇಲೆ ಇದ್ದಾರೆ. ದೊಡ್ಡವರು. ಅವರು ಕಾಂಗ್ರೆಸ್ ನಾಯಕರ ಜತೆಯೂ ಸಂಪರ್ಕದಲ್ಲಿದ್ದಾರೆ. ಉಪಮುಖ್ಯಮಂತ್ರಿಗಳನ್ನು (ಡಿ.ಕೆ.ಶಿವಕುಮಾರ್) ಭೇಟಿ ಮಾಡಿದ್ದಾರೆ ಎಂಬ ಮಾಹಿತಿಯಿದೆ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತೀಕ್ಷ್ಣವಾಗಿ ಹೇಳಿದ್ದಾರೆ.
ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳನ್ನೂ ಗೆಲ್ಲಬೇಕು. ಇದಕ್ಕಾಗಿ ಪ್ರತಿಯೊಬ್ಬ ಸಚಿವರು ಒಂದೊಂದು ಹೋಬಳಿ ಜವಾಬ್ದಾರಿ ವಹಿಸಿಕೊಂಡು ಸಂಪೂರ್ಣ ಶ್ರಮ ಹಾಕಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಚಿವರಿಗೆ ಸೂಚನೆ ನೀಡಲಾಗಿದೆ.
ಶಿಗ್ಗಾವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಸುಗಮವಾಗಿ ಟಿಕೆಟ್ ಘೋಷಿಸಿದ ಎನ್ಡಿಎ ಕೂಟದ ಮಿತ್ರ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ಗೆ ಚನ್ನಪಟ್ಟಣ ಕ್ಷೇತ್ರ ಕಗ್ಗಂಟಾಗಿ ಪರಿಣಮಿಸಿದೆ
ಪ್ರಸಕ್ತ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಆಡಳಿತಾರೂಢ ಕಾಂಗ್ರೆಸ್ಗೆ ತಲೆಬಿಸಿ ಉಂಟುಮಾಡಿದ್ದು, ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕುತೂಹಲ ಮೂಡಿದೆ
ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ವಿರುದ್ಧ ಮತ್ತೊಂದು ಭೂ ಅಕ್ರಮದ ಆರೋಪ ಕೇಳಿ ಬಂದಿದ್ದು, ಮುಡಾಗೆ ಸೇರಿದ 20 ಗುಂಟೆ ಜಾಗವನ್ನು ಪಾರ್ವತಿ ಅವರು 2023ರ ಸೆಪ್ಟೆಂಬರ್ 29ರಂದು ರಿಜಿಸ್ಟ್ರಾರ್ ಮೂಲಕ ತಮ್ಮ ಹೆಸರಿಗೆ ಮಾಡಿಸಿಕೊಂಡಿದ್ದಾರೆ ಎಂದು ಆರ್ಟಿಐ ಕಾರ್ಯಕರ್ತ ಗಂಗರಾಜು ಆಪಾದಿಸಿದ್ದಾರೆ.
ಜಾತಿಗಣತಿ, ಒಳ ಮೀಸಲಾತಿ, ಪಂಚಮಸಾಲಿ ಮೀಸಲಾತಿ ಹಾಗೂ ಉಪ ಚುನಾವಣೆ ವಿಚಾರಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಸಂಜೆ ತಮ್ಮ ನಿವಾಸದಲ್ಲಿ ಎಲ್ಲ ಸಚಿವರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.