<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Kannada Prabha</title>
        <link>https://www.kannadaprabha.in</link>
        <description><![CDATA[Kannada Prabha - No.1 News channel in Karnataka, which delivers Local and International news in Marathi language.]]></description>
        <image>
            <url>https://static-assets.asianetnews.com/images/ogimages/OG_Bangla.jpg</url>
            <width>143</width>
            <height>100</height>
            <link>https://www.kannadaprabha.in</link>
            <title>Kannada Prabha</title>
        </image>
        <lastBuildDate>Thu, 07 May 2026 01:15:07 +0530</lastBuildDate>
        <atom:link href="https://www.kannadaprabha.in/rss" rel="self" type="application/rss+xml"/>
        <item>
            <title><![CDATA[ಮನುಷ್ಯನಿಗೆ ಹೃದಯ ಎಷ್ಟು ಮುಖ್ಯವೋ ಕಣ್ಣು ಅಷ್ಟೇ ಮುಖ್ಯ]]></title>
            <link>https://www.kannadaprabha.in/karnataka-news/the-eyes-are-as-important-to-a-person-as-the-heart-is-to-a-person/articleshow-c8516qk</link>
            <guid isPermaLink="true">https://www.kannadaprabha.in/karnataka-news/the-eyes-are-as-important-to-a-person-as-the-heart-is-to-a-person/articleshow-c8516qk</guid>
            <pubDate>Thu, 07 May 2026 01:15:00 +0530</pubDate>
            <description><![CDATA[ಚಿತ್ರದುರ್ಗದಲ್ಲಿ ನಡೆದ ನೇತ್ರದಾನ ಶಿಬಿರವನ್ನು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಉದ್ಘಾಟಿಸಿ ಮಾತನಾಡಿದರು.]]></description>
            <media:content url="https://static-assets.asianetnews.com/kp/json/06052026/pictures/6HSD1_832.JPG" type="image/jpeg" height="390" width="690"/>
            <content:encoded><![CDATA[&lt;p&gt;ಕನ್ನಡಪ್ರಭ ವಾರ್ತೆ ಚಿತ್ರದುರ್ಗ&lt;/p&gt;ಮನುಷ್ಯನಿಗೆ ಹೃದಯ ಎಷ್ಟು ಮುಖ್ಯವೋ ಕಣ್ಣು ಕೂಡ ಅಷ್ಟೇ ಮುಖ್ಯ. ಸಣ್ಣಪುಟ್ಟ ದೋಷಗಳು ಕಂಡಲ್ಲಿ ಉಚಿತ ನೇತ್ರಚಿಕಿತ್ಸಾ ಶಿಬಿರಗಳಲ್ಲಿ ಭಾಗವಹಿಸಿ ಚಿಕಿತ್ಸೆಯನ್ನು ಪಡೆಯಿರಿ ಎಂದು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ತಿಳಿಸಿದರು.&lt;p&gt;ನಗರದ 19ನೇ ವಾರ್ಡಿನ ಬುಧವಾರ ಲಿಟ್ಲ್ ಏಂಜಲ್ ನರ್ಸರಿ ಸ್ಕೂಲ್ ಮತ್ತು ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನೇತ್ರದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.&lt;/p&gt;ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಬಹುತೇಕ ಹಳ್ಳಿಗಳಲ್ಲಿ ಈ ಶಿಬಿರವನ್ನು ಆಯೋಜನೆ ಮಾಡಿದ್ದು, ಕ್ಷೇತ್ರದ ಮತದಾರರು ಕಣ್ಣಿನ ಸಮಸ್ಯೆಯಿಂದ ವಂಚಿತರಾಗಬಾರದು ಎನ್ನುವ ನಿಟ್ಟಿನಲ್ಲಿ ಶಂಕರ್ ಕಣ್ಣಿನ ಆಸ್ಪತ್ರೆಯ ಸಹಯೋಗದೊಂದಿಗೆ ನಿರಂತರವಾಗಿ ಕಣ್ಣಿನ ಸಮಸ್ಯೆ ಇರುವಂತವರಿಗೆ ಉಚಿತವಾಗಿ ಸೇವೆಯನ್ನು ನೀಡಲಾಗುತ್ತದೆ ಎಂದು ತಿಳಿಸಿದರು.&lt;p&gt;ಈಗಾಗಲೇ ಕ್ಷೇತ್ರದ ಬಹುತೇಕ ಕಳ್ಳಿಗಳಲ್ಲಿ ಶಿಬಿರವನ್ನು ನಡೆಸಿ ಮೂರು ಸಾವಿರಕ್ಕೂ ಹೆಚ್ಚು ಜನರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆಯನ್ನು ನಡೆಸಲಾಗಿದೆ, ಏಳು ಸಾವಿರ ಜನರಿಗೆ ಕಣ್ಣಿನ ಕನ್ನಡಕವನ್ನು ವಿತರಿಸಲಾಗಿದೆ, ಯಾವುದೇ ಜನರಿಂದಲೂ ಸಹ ಹಣವನ್ನು ತೆಗೆದುಕೊಳ್ಳದೆ ಉಚಿತವಾಗಿ ಕೆಲಸವನ್ನು ನಮ್ಮ ಮಾವನವರಾದ ದೊಡ್ಡಣ್ಣ ಅವರ ನೇತೃತ್ವದಲ್ಲಿ ನಡೆಯುತ್ತಿದೆ ಎಂದರು.&lt;/p&gt;ಕಾಂಗ್ರೆಸ್ ಮುಖಂಡ ಅಂಜಿನಪ್ಪ ಕೆಳಗೋಟೆ ಮಾತನಾಡಿ, ಉಚಿತ ಆರೋಗ್ಯ ಶಿಬಿರಗಳು ಎಂದು ಯಾರು ಸಹ ನಿರ್ಲಕ್ಷವಹಿಸದೆ, ಇತಂಹ ಶಿಬಿರಗಳಲ್ಲಿ ಪ್ರತಿಯೊಬ್ಬರು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವುದು ಅಗತ್ಯವಾಗಿದೆ. ವೃದ್ಧರು, ಮಕ್ಕಳು, ಮಹಿಳೆಯರು ಯಾರೇ ಕಣ್ಣಿನ ಸಮಸ್ಯೆ ಇದ್ದಲ್ಲಿ ಪ್ರತಿ ವಾರವು ಸಹ ಕಣ್ಣಿನ ತಪಾಸಣೆಯನ್ನು ಮಾಡಲಾಗುತ್ತದೆ ಎಂದರು.&lt;p&gt;ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಶಿವಣ್ಣ, ಕಾಂಗ್ರೆಸ್ ಮುಖಂಡರಾದ ಆರ್.ಕೆ ಸರ್ದಾರ್ , ವಾಸಿಮ್, ರೆಹಮಾನ್ ಜಲೀಲ್ ಹಾಗೂ ಇತರರು ಇದ್ದರು.&lt;/p&gt;]]></content:encoded>
            <category><![CDATA[karnataka]]></category>
            <dc:creator>KannadaprabhaNewsNetwork</dc:creator>
            <atom:link href="https://www.kannadaprabha.in/karnataka-news/the-eyes-are-as-important-to-a-person-as-the-heart-is-to-a-person/articleshow-c8516qk"/>
        </item>
        <item>
            <title><![CDATA[ಮುದ್ದೇನಹಳ್ಳಿ ಸಾಯಿ ವೈದ್ಯ ಕಾಲೇಜಿಗೆ ರಾಷ್ಟ್ರೀಯ ಗರಿ!]]></title>
            <link>https://www.kannadaprabha.in/karnataka-news/national-feather-to-muddenahalli-sai-medical-college/articleshow-rgtprqz</link>
            <guid isPermaLink="true">https://www.kannadaprabha.in/karnataka-news/national-feather-to-muddenahalli-sai-medical-college/articleshow-rgtprqz</guid>
            <pubDate>Thu, 07 May 2026 01:15:00 +0530</pubDate>
            <description><![CDATA[ಈ ಪ್ರತಿಷ್ಠಿತ ಮಾನ್ಯತೆಯಿಂದಾಗಿ ಸಂಸ್ಥೆಯು ರೋಗಿಯ ಸುರಕ್ಷತೆ, ಗುಣಮಟ್ಟದ ಚಿಕಿತ್ಸೆ ಹಾಗೂ ಆಸ್ಪತ್ರೆ ನಿರ್ವಹಣೆಯ ರಾಷ್ಟ್ರೀಯ ಮಾನದಂಡಗಳನ್ನು ಸಮರ್ಥವಾಗಿ ಪಾಲಿಸುತ್ತಿದೆ ಎಂಬುದು ದೃಢಪಟ್ಟಿದೆ. ಸಂಪೂರ್ಣ ಉಚಿತ ಸೇವೆಗಳನ್ನು ನೀಡುವ ದೇಶದ ವಿರಳ ಗ್ರಾಮೀಣ ವೈದ್ಯಕೀಯ ಕಾಲೇಜುಗಳಲ್ಲಿ ಒಂದಾದ ಈ ಸಂಸ್ಥೆಗೆ ಹೊಸ ಗರಿಮೆ]]></description>
            <media:content url="https://static-assets.asianetnews.com/kp/json/06052026/pictures/CKB_1_233.JPG" type="image/jpeg" height="390" width="690"/>
            <content:encoded><![CDATA[&lt;p&gt;ಕನ್ನಡಪ್ರಭ ವಾರ್ತೆ, ಚಿಕ್ಕಬಳ್ಳಾಪುರ&lt;/p&gt;ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದ ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ ರಾಷ್ಟ್ರೀಯ ಆಸ್ಪತ್ರೆಗಳು ಮತ್ತು ಆರೋಗ್ಯ ಸೇವಾ ಮಾನ್ಯತಾ ಮಂಡಳಿ (ಎನ್ಎಬಿಹೆಚ್) ಆರಂಭಿಕ ಹಂತದ ಮಾನ್ಯತೆ ನೀಡಿದೆ. ಇದರೊಂದಿಗೆ ಗ್ರಾಮೀಣ ಆರೋಗ್ಯ ಸೇವೆಗೆ ಹೊಸ ಬಲ ಸಿಕ್ಕಂತಾಗಿದೆ.&lt;p&gt; ಈ ಪ್ರತಿಷ್ಠಿತ ಮಾನ್ಯತೆಯಿಂದಾಗಿ ಸಂಸ್ಥೆಯು ರೋಗಿಯ ಸುರಕ್ಷತೆ, ಗುಣಮಟ್ಟದ ಚಿಕಿತ್ಸೆ ಹಾಗೂ ಆಸ್ಪತ್ರೆ ನಿರ್ವಹಣೆಯ ರಾಷ್ಟ್ರೀಯ ಮಾನದಂಡಗಳನ್ನು ಸಮರ್ಥವಾಗಿ ಪಾಲಿಸುತ್ತಿದೆ ಎಂಬುದು ದೃಢಪಟ್ಟಿದೆ. ಸಂಪೂರ್ಣ ಉಚಿತ ಸೇವೆಗಳನ್ನು ನೀಡುವ ದೇಶದ ವಿರಳ ಗ್ರಾಮೀಣ ವೈದ್ಯಕೀಯ ಕಾಲೇಜುಗಳಲ್ಲಿ ಒಂದಾದ ಈ ಸಂಸ್ಥೆಗೆ ಹೊಸ ಗರಿಮೆ ಲಭಿಸಿದಂತಾಗಿದೆ.&lt;/p&gt;ನಿರಂತರ ಪರಿಶ್ರಮ: ಸದ್ಗುರು ಶ್ರೀ ಮಧುಸೂದನ ಸಾಯಿ ಅವರ ಮಾರ್ಗದರ್ಶನದಲ್ಲಿ 2025ರ ಜನವರಿಯಲ್ಲಿ ಆರಂಭವಾದ ಗುಣಮಟ್ಟ ಸುಧಾರಣಾ ಪ್ರಕ್ರಿಯೆ, ಒಂದು ವರ್ಷದ ನಿರಂತರ ಪರಿಶ್ರಮ, ಶಿಸ್ತು ಮತ್ತು ತಂಡದ ಪ್ರಯತ್ನದ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ. ವೈದ್ಯರು, ಶುಶ್ರೂಷಕರು ಹಾಗೂ ಸಿಬ್ಬಂದಿ ವರ್ಗದ ಪ್ರಯತ್ನಗಳಿಂದ ಕ್ಲಿನಿಕಲ್ ಮತ್ತು ಆಡಳಿತಾತ್ಮಕ ವ್ಯವಸ್ಥೆಗಳು ರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿ ರೂಪುಗೊಂಡು ಜಾರಿಗೊಂಡಿವೆ.&lt;p&gt;ಆರಂಭಿಕ ಮಾನ್ಯತೆ: &lt;/p&gt;ಈ ಅವಧಿಯಲ್ಲಿ ಆಂತರಿಕ ಹಾಗೂ ಬಾಹ್ಯ ಲೆಕ್ಕಪರಿಶೋಧನೆಗಳನ್ನು ಹಲವು ಹಂತಗಳಲ್ಲಿ ನಡೆಸಿ, ಕಾರ್ಯವಿಧಾನಗಳನ್ನು ಪರಿಶೀಲಿಸಿ ಸುಧಾರಣೆ ಕೈಗೊಳ್ಳಲಾಗಿದೆ. 2026ರ ಜನವರಿ 12ರಂದು ನಡೆದ ಎನ್ಎಬಿಹೆಚ್ ಪರಿಶೀಲನೆಯಲ್ಲಿ ಸಂಸ್ಥೆ ಯಶಸ್ವಿಯಾಗಿ ಉತ್ತೀರ್ಣವಾಗಿದೆ.&lt;p&gt;ಬಾಕ್ಸ್.. ಸಂಪೂರ್ಣ ಮಾನ್ಯತೆ: ಡಾ. ಪದ್ಮಶ್ರೀ ವಿಶ್ವಾಸ&lt;/p&gt;ದೇಶದಲ್ಲಿರುವ ಸುಮಾರು 80 ರಿಂದ 90 ಸಾವಿರ ಆಸ್ಪತ್ರೆಗಳ ಪೈಕಿ ಕೇವಲ ಶೇ. 1.4 ರಷ್ಟು ಆಸ್ಪತ್ರೆಗಳು ಮಾತ್ರ ಸಂಪೂರ್ಣ ಮಾನ್ಯತೆ ಪಡೆದಿವೆ. ಸುಮಾರು ಶೇ.3 ಆಸ್ಪತ್ರೆಗಳು ಮಾತ್ರ ಆರಂಭಿಕ ಹಂತದ ಮಾನ್ಯತೆ ಹೊಂದಿವೆ. ಸಂಪೂರ್ಣ ಉಚಿತ ವೈದ್ಯಕೀಯ ಸೇವೆಗಳನ್ನು ನೀಡುವ ಆಸ್ಪತ್ರೆಗಳ ಸಂಖ್ಯೆ ತೀರಾ ಕಡಿಮೆ. ನಮ್ಮ ಸಂಸ್ಥೆಗೆ ಮಾನ್ಯತೆ ದೊರಕಿರುವುದು ಮೊದಲ ಹೆಜ್ಜೆಯಾಗಿದೆ. ಶೀಘ್ರದಲ್ಲೇ ಸಂಪೂರ್ಣ ಎನ್ಎಬಿಹೆಚ್ ಮಾನ್ಯತೆ ಪಡೆಯುವ ವಿಶ್ವಾಸವೂ ನಮಗಿದೆ ಎಂದು ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮೆಡಿಕಲ್&zwnj; ಸೂಪರಿಂಟೆಂಡೆಂಟ್&zwnj; ಡಾ. ಪದ್ಮಶ್ರೀ ಹೇಳಿದರು. ಸಿಕೆಬಿ-1 ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ.]]></content:encoded>
            <category><![CDATA[karnataka]]></category>
            <dc:creator>KannadaprabhaNewsNetwork</dc:creator>
            <atom:link href="https://www.kannadaprabha.in/karnataka-news/national-feather-to-muddenahalli-sai-medical-college/articleshow-rgtprqz"/>
        </item>
        <item>
            <title><![CDATA[ವಿದ್ಯಾರ್ಥಿಗಳ ಸೃಜನಶೀಲತೆ, ಪರಿಶ್ರಮದಲ್ಲಿ ದೇಶದ ಭವಿಷ್ಯ]]></title>
            <link>https://www.kannadaprabha.in/karnataka-news/the-future-of-the-country-lies-in-the-creativity-and-hard-work-of-students/articleshow-okdve50</link>
            <guid isPermaLink="true">https://www.kannadaprabha.in/karnataka-news/the-future-of-the-country-lies-in-the-creativity-and-hard-work-of-students/articleshow-okdve50</guid>
            <pubDate>Thu, 07 May 2026 01:15:00 +0530</pubDate>
            <description><![CDATA[ಚಿತ್ರದುರ್ಗ ನಗರದ ಎಸ್‌ಜೆಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ವತಿಯಿಂದ ಒಂದು ದಿನದ ಅಂತರ್ ಕಾಲೇಜು ವಿದ್ಯುತೋತ್ಸವ- 2026 ಕಾರ್ಯಕ್ರಮವನ್ನು ಸಂಸ್ಥೆಯ ಪ್ರಾಂಶುಪಾಲ ಡಾ.ಪಿ.ಬಿ.ಭರತ್ ಉದ್ಘಾಟಿಸಿದರು.]]></description>
            <media:content url="https://static-assets.asianetnews.com/kp/json/06052026/pictures/6HSD3_856.JPG" type="image/jpeg" height="390" width="690"/>
            <content:encoded><![CDATA[&lt;p&gt;ಡಾ.ಪಿ.ಬಿ.ಭರತ್ ಅಭಿಮತ । ಅಂತರ್ ಕಾಲೇಜು ವಿದ್ಯುತೋತ್ಸವ-2026 ಕಾರ್ಯಕ್ರಮ ಉದ್ಘಾಟನೆಕನ್ನಡಪ್ರಭ ವಾರ್ತೆ ಚಿತ್ರದುರ್ಗ&lt;/p&gt;ವಿದ್ಯಾರ್ಥಿಗಳಲ್ಲಿರುವ ಸೃಜನಶೀಲತೆ ಮತ್ತು ಪರಿಶ್ರಮ ದೇಶದ ಭವಿಷ್ಯವನ್ನು ರೂಪಿಸಲಿದೆ ಎಂದು ಸಂಸ್ಥೆಯ ಪ್ರಾಂಶುಪಾಲ ಡಾ.ಪಿ.ಬಿ.ಭರತ್ ಹೇಳಿದರು.&lt;p&gt;ನಗರದ ಎಸ್&zwnj;ಜೆಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ವತಿಯಿಂದ ಒಂದು ದಿನದ ಅಂತರ್ ಕಾಲೇಜು ವಿದ್ಯುತೋತ್ಸವ-2026 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.&lt;/p&gt;ತಂತ್ರಜ್ಞಾನವು ಇಂದು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ವಿಶೇಷವಾಗಿ ವಿದ್ಯುತ್ ತಂತ್ರಜ್ಞಾನ ಕ್ಷೇತ್ರವು ಮಾನವ ಜೀವನವನ್ನು ಸುಲಭಗೊಳಿಸುವಲ್ಲಿ ಮಹತ್ತರ ಪಾತ್ರ ವಹಿಸಿದೆ. ಬೆಳಕಿನಿಂದ ಹಿಡಿದು ಸಂವಹನದವರೆಗೆ, ಕೈಗಾರಿಕೆಗಳಿಂದ ಹಿಡಿದು ಡಿಜಿಟಲ್ ಯುಗದವರೆಗೆ ವಿದ್ಯುತ್ ತಂತ್ರಜ್ಞಾನದ ಪ್ರಭಾವವನ್ನು ಕಾಣಬಹುದು ಎಂದರು. &lt;p&gt;ಈ ತಾಂತ್ರಿಕ ಉತ್ಸವವು ಕೇವಲ ಸ್ಪರ್ಧೆಗಳ ವೇದಿಕೆಯಲ್ಲ, ನಿಮ್ಮ ಪ್ರತಿಭೆ, ಸೃಜನಶೀಲತೆ ಮತ್ತು ನವೀನ ಚಿಂತನೆಗಳನ್ನು ಪ್ರದರ್ಶಿಸುವ ಅದ್ಭುತ ಅವಕಾಶವಾಗಿದೆ. ರಾಜ್ಯದ ವಿವಿಧ ಎಂಜಿನಿಯರಿಂಗ್ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಿಂದ ಆಗಮಿಸಿದ ವಿದ್ಯಾರ್ಥಿಗಳು ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ಹಂಚಿಕೊಳ್ಳುವುದರ ಮೂಲಕ ಪರಸ್ಪರ ಕಲಿಕೆ ಮತ್ತು ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದರು.&lt;/p&gt;ದಾವಣಗೆರೆ ಜಿ.ಎಂ.ವಿಶ್ವವಿದ್ಯಾಲಯದ ಎಲೆಕ್ಟ್ರಿಕಲ್ ವಿಭಾಗದ ಮುಖ್ಯಸ್ಥ ಡಾ.ಮರುಳಸಿದ್ದಪ್ಪ ಎಚ್.ಬಿ.ಮಾತನಾಡಿ, ನಮ್ಮ ದಿನನಿತ್ಯದ ಜೀವನದಲ್ಲಿ ವಿದ್ಯುತ್ ಇಲ್ಲದೆ ಏನೂ ಸಾಧ್ಯವಿಲ್ಲ. ಇಂಧನ ಉತ್ಪಾದನೆ, ಪ್ರಸರಣ, ನವೀಕರಿಸಬಹುದಾದ ಶಕ್ತಿ, ಸ್ಮಾರ್ಟ್ ಗ್ರಿಡ್ ತಂತ್ರಜ್ಞಾನ, ಇವೆಲ್ಲವೂ ದೇಶದ ಅಭಿವೃದ್ಧಿಗೆ ಪ್ರಮುಖವಾಗಿವೆ. ಇಂತಹ ತಾಂತ್ರಿಕ ಉತ್ಸವಗಳು ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಮತ್ತು ನವೀನ ಆಲೋಚನೆಗಳನ್ನು ಹಂಚಿಕೊಳ್ಳಲು ಅತ್ಯುತ್ತಮ ವೇದಿಕೆಯಾಗಿವೆ ಎಂದರು. &lt;p&gt;ನಮ್ಮ ದೇಶವು ಇಂದು ಶಕ್ತಿ ಕ್ಷೇತ್ರದಲ್ಲಿ ದೊಡ್ಡ ಪರಿವರ್ತನೆಯನ್ನು ಕಾಣುತ್ತಿದೆ. ಸೌರಶಕ್ತಿ, ಗಾಳಿ ಶಕ್ತಿ ಮತ್ತು ವಿದ್ಯುತ್ ವಾಹನಗಳ ಅಭಿವೃದ್ಧಿ ಇವುಗಳಲ್ಲಿ ಯುವ ಎಂಜಿನಿಯರ್&zwnj;ಗಳ ಪಾತ್ರ ಅತ್ಯಂತ ಮುಖ್ಯವಾಗಿದೆ. ನಿಮ್ಮಂತಹ ವಿದ್ಯಾರ್ಥಿಗಳಿಂದಲೇ ನಾಳೆಯ ಭಾರತವು ಇನ್ನಷ್ಟು ಶಕ್ತಿಶಾಲಿಯಾಗಲಿದೆ. ಗೆಲುವಿಗಿಂತ ಕಲಿಕೆ ಮುಖ್ಯ ಎಂಬುದನ್ನು ಮರೆಯಬೇಡಿ ಎಂದರು.&lt;/p&gt;ಎಲೆಕ್ಟ್ರಿಕಲ್ ವಿಭಾಗದ ಮುಖ್ಯಸ್ಥ ಡಾ. ಬಿ.ಜಿ.ಕುಮಾರಸ್ವಾಮಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಚಲಕ ಡಾ.ಎ.ಎಂ.ರಾಜೇಶ್, ಡೀನ್ ಅಕಾಡೆಮಿಕ್ ಡಾ.ಚೇತನ್.ಎಸ್, ಕಾರ್ಯಕ್ರಮದ ಸಂಚಾಲಕ ಡಾ.ಎಸ್.ಸಿ.ಮಂಜುನಾಥ್, ಸಂಯೋಜಕರಾದ ಪ್ರೊ.ಸುಧಾ.ಟಿ, ಪ್ರೊ.ನೂರ್&zwnj;ಫಾತಿಮ, ಪ್ರೊ.ಸುಶ್ಮಿತಾದೇಬ್, ವಿದ್ಯಾರ್ಥಿ ಸಂಯೋಜಕರಾದ ಕಾವ್ಯ, ಚಂದನ್, ಭರತ್, ವೆಂಕಟೇಶ್, ಚಂದನ, ವಿಭಾಗದ ಬೋದಕ ಮತ್ತು ಬೋದಕೇತರ ಸಿಬ್ಬಂದಿಯವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ತೇಜಸ್ವಿನಿ ಪ್ರಾರ್ಥಿಸಿ, ಬಿಬಿ ಹಜಿರಾ ಸ್ವಾಗತಿಸಿ, ಕೇಸರ್ ಮಲನ್ ನಿರೂಪಿಸಿ ವಂದಿಸಿದರು.]]></content:encoded>
            <category><![CDATA[karnataka]]></category>
            <dc:creator>KannadaprabhaNewsNetwork</dc:creator>
            <atom:link href="https://www.kannadaprabha.in/karnataka-news/the-future-of-the-country-lies-in-the-creativity-and-hard-work-of-students/articleshow-okdve50"/>
        </item>
        <item>
            <title><![CDATA[ಬಿಎಸ್‌ವೈ ಪುರ ಪ್ರವೇಶಕ್ಕೆ ಸಾಂಸ್ಕೃತಿಕ ಸ್ಪರ್ಶ]]></title>
            <link>https://www.kannadaprabha.in/karnataka-news/a-cultural-touch-to-bsy-pura-admission/articleshow-ucvfchs</link>
            <guid isPermaLink="true">https://www.kannadaprabha.in/karnataka-news/a-cultural-touch-to-bsy-pura-admission/articleshow-ucvfchs</guid>
            <pubDate>Thu, 07 May 2026 01:15:00 +0530</pubDate>
            <description><![CDATA[ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಘೋಷಿಸಿದ ಯೋಜನೆಗಳ ಸ್ತಬ್ಧ ಚಿತ್ರಗಳಿಗೆ ಕಲಾವಿದರು ಅಂತಿಮ ಸ್ಪರ್ಶ ನೀಡುತ್ತಿದ್ದಾರೆ.]]></description>
            <media:content url="https://static-assets.asianetnews.com/kp/json/06052026/pictures/6CTD4_651.JPG" type="image/jpeg" height="390" width="690"/>
            <content:encoded><![CDATA[&lt;p&gt;ಕನ್ನಡಪ್ರಭ ವಾರ್ತೆ ಚಿತ್ರದುರ್ಗ&lt;/p&gt;ಅಭಿಮಾನೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ಕೋಟೆನಾಡು ಚಿತ್ರದುರ್ಗ ಸಜ್ಜಾಗಿದೆ. ಬಿಎಸ್&zwnj;ವೈ ಪುರಪ್ರವೇಶಕ್ಕೆ ಸಾಂಸ್ಕೃತಿಕ ಸ್ಪರ್ಶ ನೀಡಲು ಸಕಲ ಸಿದ್ಧತೆಗಳು ಭರದಿಂದ ಸಾಗಿವೆ.&lt;p&gt;ಮೇ 8ರ ಶುಕ್ರವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಹೊಳಲ್ಕೆರೆ ರಸ್ತೆಯ ಕನಕ ವೃತ್ತಕ್ಕೆ ಆಗಮಿಸುವ ಯಡಿಯೂರಪ್ಪ ಅವರನ್ನು ಒಂದು ಸಾವಿರ ಮಹಿಳೆಯರು ಪೂರ್ಣಕುಂಭದೊಂದಿಗೆ ಸ್ವಾಗತಿಸಲಿದ್ದಾರೆ. ಇದೇ ಸಂದರ್ಭದಲ್ಲಿ ರೈತರು ಸಾಂಪ್ರದಾಯಿಕ ರಾಶಿ ಪೂಜೆ ಯೊಂದಿಗೆ ರೈತ ಗೌರವ ಸಲ್ಲಿಸಲಿದ್ದಾರೆ. ಕನಕದಾಸ ವೃತ್ತದ ಸಮೀಪದ ಚಂದ್ರವಳ್ಳಿ ಮೈದಾನದಿಂದ ಸಾಗುವ ಮೆರವಣಿಗೆಯಲ್ಲಿ ಯಡಿಯೂರಪ್ಪನವರನ್ನು ಪುಷ್ಪಾಲಂಕೃತ ಸಾರೋಟ್&zwnj;ನಲ್ಲಿ ಕುಳ್ಳರಿಸಿ ಮೆರವಣಿಗೆಯಲ್ಲಿ ಕರೆ ತರಲಾಗುವುದು. &lt;/p&gt;2000ಕ್ಕೂ ಹೆಚ್ಚಿನ ಸಂಖ್ಯೆಯ ರೈತರು ನೇಗಿಲು ಹಿಡಿದು ಶಿಸ್ತುಬದ್ಧವಾಗಿ ಮೆರವಣಿಗೆಯಲ್ಲಿ ರೈತ ಘೋಷಣೆಯೊಂದಿಗೆ ನಡೆದು ಬರಲಿದ್ದಾರೆ. ಒನಕೆ ಓಬವ್ವನ ನೆಲದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ &lsquo;ನಾರಿ ಶಕ್ತಿ ವಂದನ್&zwnj;ʼ ಕಾಯ್ದೆಗೆ ಗೌರವ ಸಲ್ಲಿಸಲು 200ಕ್ಕೂ ಹೆಚ್ಚು ಮಹಿಳೆಯರು ಒನಕೆ ಓಬವ್ವನ ಪಾತ್ರಧಾರಿಗಳಾಗಿ ಶಿಸ್ತುಬದ್ಧವಾಗಿ ಮೆರವಣಿಗೆಯಲ್ಲಿ ನಡೆದು ಬರಲಿದ್ದಾರೆ. ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸುತ್ತಿರುವ ಸುಮಾರು 25ಕ್ಕೂ ಹೆಚ್ಚು ಸಾಂಸ್ಕೃತಿಕ ಹಾಗೂ ಜನಪದ ತಂಡಗಳು ಈ ಮೆರವಣಿಗೆಯಲ್ಲಿ ಭಾಗವಹಿಸುತ್ತಿವೆ.&lt;p&gt;ಯಡಿಯೂರಪ್ಪನವರ ಹೋರಾಟದ ದಿನಗಳ ನೆನಪಾಗಿ ಉಳಿದಿರುವ ಅವರ ವಾಹನ (ಅಂಬಾಸಿಡರ್&zwnj; ಕಾರು CKR 45) ಸಹ ಪ್ರಮುಖ ಆಕರ್ಷಣೆಯಾಗಲಿದೆ. ಮೆರವಣಿಗೆಗೆ ವಿಶೇಷ ಮೆರಗು ನೀಡಲು ಹಾಗೂ ಯಡಿಯೂರಪ್ಪನವರು ನಡೆದು ಬಂದ ಹಾದಿ, ಸಾಧನೆ ಹಾಗೂ ಅವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ನೀಡಲಾದ ಜನಪ್ರಿಯ ಯೋಜನೆಗಳಾದ ಭಾಗ್ಯಲಕ್ಷ್ಮೀ, ಹೆಣ್ಣುಮಕ್ಕಳಿಗೆ ಸೈಕಲ್&zwnj; ವಿತರಣೆ, ಕೃಷಿ ಬಜೆಟ್&zwnj; ಮೊದಲಾದವುಗಳನ್ನು ಪ್ರತಿಬಿಂಬಿಸುವ ಸ್ತಬ್ಧ ಚಿತ್ರಗಳು ಮೆರವಣಿಗೆಯ ಪ್ರಮುಖ ಆಕರ್ಷಣೆಗಳಾಗಲಿವೆ. ನಾಡಿನ ಹೆಸರಾಂತ ಕಲಾವಿದರು ಈ ಸ್ತಬ್ಧ ಚಿತ್ರಗಳನ್ನು ರೂಪಿಸುತ್ತಿದ್ದಾರೆ.&lt;/p&gt;ಮೆರವಣಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷರೂ ಆದ ಮಾಜಿ ಸಚಿವ ಶ್ರೀರಾಮುಲು ಅವರೂ ಸೇರಿದಂತೆ ಅನೇಕ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.]]></content:encoded>
            <category><![CDATA[karnataka]]></category>
            <dc:creator>KannadaprabhaNewsNetwork</dc:creator>
            <atom:link href="https://www.kannadaprabha.in/karnataka-news/a-cultural-touch-to-bsy-pura-admission/articleshow-ucvfchs"/>
        </item>
    </channel>
</rss>
