ಸಾರಾಂಶ
ಅಮಾನತುಗೊಂಡ ಕಾರಣ ಚೊಚ್ಚಲ ಆವೃತ್ತಿಯ ಬೀಚ್ ಕಬಡ್ಡಿ ಚಾಂಪಿಯನ್ಶಿಪ್ನಲ್ಲಿ ಭಾರತದ ತಂಡಗಳು ಪಾಲ್ಗೊಳ್ಳುವುದಿಲ್ಲ. ಭಾರತೀಯ ತಂಡಗಳ ಸ್ಪರ್ಧೆಗೆ ನಿಷೇಧ ಹೇರಲಾಗಿದೆ.
ನವದೆಹಲಿ: ಆಡಳಿತದ ಗೊಂದಲ ಮುಂದುವರಿದಿರುವ ಹಿನ್ನೆಲೆಯಲ್ಲಿ ಭಾರತೀಯ ಅಮೆಚೂರ್ ಕಬಡ್ಡಿ ಸಂಸ್ಥೆ(ಎಕೆಎಫ್ಐ)ಯನ್ನು ಅಂತಾರಾಷ್ಟ್ರೀಯ ಕಬಡ್ಡಿ ಒಕ್ಕೂಟ ಅಮಾನತುಗೊಳಿಸಿದೆ. ಈ ಮೂಲಕ ಜಾಗತಿಕ ಕೂಟಗಳಲ್ಲಿ ಭಾರತೀಯ ತಂಡಗಳ ಸ್ಪರ್ಧೆಗೆ ನಿಷೇಧ ಹೇರಿದೆ.
ಹೀಗಾಗಿ ಚೊಚ್ಚಲ ಆವೃತ್ತಿಯ ಬೀಚ್ ಕಬಡ್ಡಿ ಚಾಂಪಿಯನ್ಶಿಪ್ನಲ್ಲಿ ಭಾರತದ ತಂಡಗಳು ಪಾಲ್ಗೊಳ್ಳುವುದಿಲ್ಲ. ಎಕೆಎಫ್ಐಗೆ ಕಳೆದ 5 ವರ್ಷಗಳಿಂದ ಚುನಾಯಿತ ಸಮಿತಿಯಿಲ್ಲ.
ನಿಯಮ ಉಲ್ಲಂಘಣೆ ಕಾರಣಕ್ಕೆ ಎಕೆಎಫ್ಐನ ಅಮಾನತುಗೊಳಿಸಿದ್ದ ದೆಹಲಿ ಹೈಕೋರ್ಟ್, ನ್ಯಾ. ಎಸ್.ಪಿ. ಗರ್ಗ್ ಅವರನ್ನು 2019ರಲ್ಲಿ ಆಡಳಿತಾಧಿಕಾರಿಯಾಗಿ ನೇಮಿಸಿತ್ತು. 2023ರ ಡಿಸೆಂಬರ್ನಲ್ಲಿ ಎಕೆಎಫ್ಐಗೆ ಚುನಾವಣೆ ನಡೆದಿತ್ತಾದರೂ ನಿಯಮ ಪಾಲಿಸಿಲ್ಲ ಎಂದು ದೆಹಲಿ ಹೈಕೋರ್ಟ್ ಚುನಾವಣೆಯನ್ನು ಅಸಿಂಧುಗೊಳಿಸಿತ್ತು.