ಇದು ಹೇಡಿತನದ ಕೃತ್ಯ: ಮೋದಿ ತೀವ್ರ ಆಕ್ರೋಶಕೆನಡಾದ ಬ್ರಾಂಪ್ಟನ್ನಲ್ಲಿರುವ ಹಿಂದೂ ದೇವಾಲಯದ ಹೊರಗೆ ಹಿಂದೂಗಳ ಮೇಲೆ ನಡೆದ ಹಲ್ಲೆಯನ್ನು ಹಾಗೂ ಭಾರತದ ರಾಜತಾಂತ್ರಿಕರ ಮೇಲೆ ಕೆನಡಾ ಕೈಗೊಂಡ ದ್ವೇಷದ ಕ್ರಮಗಳನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಕಠೋರ ಶಬ್ದಗಳಲ್ಲಿ ಖಂಡಿಸಿದ್ದು, ‘ಇದು ಹೇಡಿತನದ ಕೃತ್ಯ’ ಎಂದಿದ್ದಾರೆ ಹಾಗೂ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಕೆನಡಾ ಜತೆಗಿನ ವಿವಾದ ಭುಗಿಲೆದ್ದ ಬಳಿಕ ಪ್ರಧಾನಿ ಮೋದಿ ಅವರು ನೀಡಿದ ಮೊದಲ ಹೇಳಿಕೆ ಇದಾಗಿದೆ.