ಭಾರತದ ಯೋಗ ಪರಂಪರೆಗೆ ಈ ಹಿಂದೆ ಮನ್ನಣೆ ನೀಡಿದ್ದ ವಿಶ್ವಸಂಸ್ಥೆ ಇದೀಗ ಭಾರತದ ಧ್ಯಾನಕ್ಕೂ ಮನ್ನಣೆ ನೀಡಿದೆ. ಕನ್ನಡಿಗ ಶ್ರೀ ಶ್ರೀ ರವಿಶಂಕರ್ ಗುರೂಜಿ ನೇತೃತ್ವದಲ್ಲಿ ವಿಶ್ವಸಂಸ್ಥೆಯ ಮುಖ್ಯ ಕಚೇರಿಯಲ್ಲಿ ಮೊದಲ ವಿಶ್ವ ಧ್ಯಾನ ದಿನ ಘೋಷಣೆ ಮಾಡಲಾಗಿದ್ದು, ಶನಿವಾರ ವಿಶ್ವಾದ್ಯಂತ ಆಚರಿಸಲಾಗಿದೆ.
ಓಪನ್ ಎಐ ನ ಆರ್ಟಿಫಿಶಿಯಲ್ ಇಂಟಲಿಜೆನ್ಸ್ನ ಸಂಶೋಧಕರಾಗಿ ಕೆಲಸ ಮಾಡಿದ್ದ ಹಾಗೂ ಆ ಕಂಪನಿ ವಿರುದ್ಧವೇ ದನಿ ಎತ್ತಿದ್ದ 26 ವರ್ಷದ ಭಾರತೀಯ ಮೂಲದ ಸುಚಿರ್ ಬಾಲಾಜಿ ಶವ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಸ್ಯಾನ್ ಫ್ರಾನ್ಸಿಸ್ಕೋದ ಅಪಾರ್ಟ್ಮೆಂಟ್ನಲ್ಲಿ ಪತ್ತೆಯಾಗಿದೆ
ಭಾರತದ ಭೂಭಾಗಳ ಮೇಲೆ ನೆರೆಯ ಬಾಂಗ್ಲಾದೇಶ ಕಣ್ಣುಹಾಕಿದೆ. ಬಾಂಗ್ಲಾ ಮಾಜಿ ಪ್ರಧಾನಿ ಖಲೀದಾ ಜಿಯಾ ಅವರ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (ಬಿಎನ್ಪಿ) ನಾಯಕರೊಬ್ಬರು, ‘ಬಂಗಾಳ, ಬಿಹಾರ ಮತ್ತು ಒಡಿಶಾದ ಮೇಲೆ ದೇಶವು ನ್ಯಾಯಸಮ್ಮತವಾದ ಹಕ್ಕುಗಳನ್ನು ಹೊಂದಿದೆ’ ಎಂದು ಹೇಳಿದ್ದಾರೆ.