ವಿಶ್ವದ ನಂ.1 ಶ್ರೀಮಂತ ಹಾಗೂ ಅಮೆರಿಕ ಭಾವಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ಎಲಾನ್ ಮಸ್ಕ್ ಅವರು ಬ್ರಿಟನ್ ಪ್ರಧಾನ ಮಂತ್ರಿ ಸರ್ ಕೀರ್ ಸ್ಟಾರ್ಮರ್ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ ಹಾಗೂ ‘ಸ್ಟಾರ್ಮರ್ ಇಡೀ ದೇಶಕ್ಕೇ ಮುಜುಗರ’ ಎಂದು ಟೀಕಿಸಿದ್ದಾರೆ.
ಇಡೀ ವಿಶ್ವವನ್ನೇ ಸ್ತಬ್ಧಗೊಳಿಸಿದ್ದ ಕೊರೋನಾ ವೈರಸ್ ಹಾವಳಿ ಕಾಣಿಸಿಕೊಂಡ ಸರಿಯಾಗಿ 5 ವರ್ಷಗಳ ಬಳಿಕ ಚೀನಾದಲ್ಲಿ ಮತ್ತೆ ಹಲವು ವೈರಸ್ಗಳು ವ್ಯಾಪಕವಾಗಿ ಹಬ್ಬಿವೆ ಎಂಬ ಆತಂಕಕಾರಿ ಸುದ್ದಿಯೊಂದು ಹೊರಬಿದ್ದಿದೆ.
ಮೊಹಮ್ಮದ್ ಯೂನಸ್ ನೇತೃತ್ವದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಭಾರತ ವಿರೋಧಿ ಹೆಜ್ಜೆಗಳನ್ನಿಡುತ್ತಿರುವ ನಡುವೆಯೇ, ದೇಶದ್ರೋಹದ ಆರೋಪದಡಿ ನ.25ರಂದು ಬಂಧಿತರಾಗಿದ್ದ ಇಸ್ಕಾನ್ ಸನ್ಯಾಸಿ ಚಿನ್ಮಯ್ ದಾಸ್ ಅವರಿಗೆ ಜಾಮೀನು ನೀಡಲು ಅಲ್ಲಿನ ನ್ಯಾಯಾಲಯ ನಿರಾಕರಿಸಿದೆ.
ಭಾರತದ ಯೋಗ ಪರಂಪರೆಗೆ ಈ ಹಿಂದೆ ಮನ್ನಣೆ ನೀಡಿದ್ದ ವಿಶ್ವಸಂಸ್ಥೆ ಇದೀಗ ಭಾರತದ ಧ್ಯಾನಕ್ಕೂ ಮನ್ನಣೆ ನೀಡಿದೆ. ಕನ್ನಡಿಗ ಶ್ರೀ ಶ್ರೀ ರವಿಶಂಕರ್ ಗುರೂಜಿ ನೇತೃತ್ವದಲ್ಲಿ ವಿಶ್ವಸಂಸ್ಥೆಯ ಮುಖ್ಯ ಕಚೇರಿಯಲ್ಲಿ ಮೊದಲ ವಿಶ್ವ ಧ್ಯಾನ ದಿನ ಘೋಷಣೆ ಮಾಡಲಾಗಿದ್ದು, ಶನಿವಾರ ವಿಶ್ವಾದ್ಯಂತ ಆಚರಿಸಲಾಗಿದೆ.